ಹೊಸದಿಗಂತ ಡಿಜಿಟಲ್ ಡೆಸ್ಕ್ :
ಯುವಕನ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ವಿರೋಧಿಸಿ ಡೆಹ್ರಾಡೂನ್ನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪ್ರತಿಭಟನೆ ವೇಳೆ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ.
ಉತ್ತರಾಖಂಡದಲ್ಲಿ ನಡೆದ ನೇಮಕಾತಿ ಹಗರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಇತರ ಯುವ ಸಂಘಟನೆಗಳು ಗುರುವಾರ ಡೆಹ್ರಾಡೂನ್ನಲ್ಲಿ ಪ್ರತಿಭಟನೆ ನಡೆಸುತ್ತಿವೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಇನ್ನು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು.