ಜೆ.ಸಿ. ನಗರದಲ್ಲಿ ಮಕ್ಕಳ ಲಸಿಕಾ ಮೇಳಕ್ಕೆ ಕೇಂದ್ರ ಸಚಿವೆಯಿಂದ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಇಲ್ಲಿನ ಹೆಬ್ಬಾಳ ವಾರ್ಡ್ ವ್ಯಾಪ್ತಿಯ ಜೆ.ಸಿ. ನಗರದ ಸರಕಾರಿ ಶಾಲೆಯಲ್ಲಿ 15-18 ವರ್ಷದೊಳಗಿನ ಮಕ್ಕಳ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ
ಚಾಲನೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ, ದೇಶದ ಎಲ್ಲ ನಾಗರಿಕರನ್ನು ಕೋವಿಡ್ ಸೋಂಕಿನಿಂದ ರಕ್ಷಿಸಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿದೆ. ಇಂದಿನಿಂದ ದೇಶದಾದ್ಯಂತ 15-18 ವರ್ಷದೊಳಗಿನವರಿಗೆ ಲಸಿಕೆ ನೀಡಿಕೆ ಆರಂಭಿಸಿರುವುದು ಅಭಿನಂದನೀಯ ಎಂದರು.

ಎಲ್ಲರ ಸುರಕ್ಷತೆಗಾಗಿ ಅವಿರತ ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಅರ್ಪಿಸಿದ ಸಚಿವರು, ದೇಶದ ಕೋವಿಡ್ ವಿರುದ್ಧದ ಸಮರದಲ್ಲಿ ಸಾರ್ವಜನಿಕರಾದ ನಮ್ಮೆಲ್ಲರ ಜವಾಬ್ದಾರಿ ತುಂಬ ದೊಡ್ಡದು. ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಿ, ನಮ್ಮ-ನಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!