Monday, January 12, 2026

ಸೆಪ್ಟೆಂಬರ್ 14ರಿಂದ ವೈಷ್ಣೋದೇವಿ ಯಾತ್ರೆ ಮತ್ತೆ ಪುನರಾರಂಭ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಗಿತಗೊಳಿಸಲಾಗಿದ್ದ ವೈಷ್ಣೋದೇವಿ ಯಾತ್ರೆ ಸೆಪ್ಟೆಂಬರ್ 14ರಿಂದ ಪುನರಾರಂಭಗೊಳ್ಳಲಿದೆ.

ಭೂಕುಸಿತ ಮತ್ತು ಮೇಘಸ್ಫೋಟಗಳು ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳ ನಂತರ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇವಾಲಯಕ್ಕೆ ಕಳೆದ 19 ದಿನಗಳಿಂದ ಯಾತ್ರೆ ಸ್ಥಗಿತಗೊಂಡಿತ್ತು.

ಆಗಸ್ಟ್ 26ರಂದು ಭಾರೀ ಮಳೆಯಿಂದಾಗಿ ತ್ರಿಕೂಟ ಬೆಟ್ಟಗಳಲ್ಲಿ ದೊಡ್ಡ ಭೂಕುಸಿತ ಸಂಭವಿಸಿತ್ತು.ಈ ದುರಂತ ಘಟನೆಯಲ್ಲಿ 34 ಯಾತ್ರಿಕರು ಪ್ರಾಣ ಕಳೆದುಕೊಂಡರು ಮತ್ತು ಅನೇಕರು ಗಾಯಗೊಂಡರು. ಅಂದಿನಿಂದ ಈ ಮಾರ್ಗವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಅದರ ಪರಿಣಾಮವಾಗಿ ಸಾವಿರಾರು ಭಕ್ತರು ಕತ್ರಾದಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ತೀರ್ಥಯಾತ್ರೆ ಪುನರಾರಂಭಗೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಅನುಕೂಲಕರ ಹವಾಮಾನ ಪರಿಸ್ಥಿತಿಗಳನ್ನು ಅವಲಂಬಿಸಿ ಈ ಯಾತ್ರೆಯನ್ನು ಪುನರಾರಂಭಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವೈಷ್ಣೋ ದೇವಿ ದೇಗುಲ ಮಂಡಳಿ ಅದಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡುತ್ತದೆ. ಯಾತ್ರಿಕರ ಅನುಕೂಲಕ್ಕಾಗಿ ದೇವಾಲಯ ಮಂಡಳಿಯು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಯಾತ್ರೆಗೆ ಸಂಬಂಧಿಸಿದ ಬುಕಿಂಗ್‌ಗಳಿಗಾಗಿ ನೀವು ಅಧಿಕೃತ ವೆಬ್‌ಸೈಟ್ http://maavaishnodevi.orgಗೆ ಭೇಟಿ ನೀಡಬಹುದು.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!