ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ತನಿಖೆಗಾಗಿ ಆರು ದಿನಗಳ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.
ಹೆಚ್ಚಿನ ತನಿಖೆಯ ಭಾಗವಾಗಿ ಇಂದು ಬೆಳಗ್ಗೆ ನಾಗೇಂದ್ರ ಅವರನ್ನು ಯಲಹಂಕದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಜು.18ರ ವರೆಗೆ ಇಡಿ ವಶಕ್ಕೆ ನೀಡುವಂತೆ ನ್ಯಾಯಾಧೀಶರು ಸೂಚಿಸಿದರು.
ನಂತರ ಶಾಂತಿನಗರದಿಂದ ಆರೋಪಿಯನ್ನು ಇಡಿ ಅಧಿಕಾರಿಗಳು ನ್ಯಾಯಾಧೀಶರ ಮನೆಯಿಂದ ಇಡಿ ಕಚೇರಿಗೆ ಕರೆದೊಯ್ದರು.