ವಂದೇ ಭಾರತ್ ಒಳಗಡೆ ವಂದೇ ಮಾತರಂ: ಕೊಳಲಿನಲ್ಲಿ ಟ್ಯೂನ್ ನುಡಿಸಿದ ಬೆಂಗಳೂರಿನ ವಿದ್ಯಾರ್ಥಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ನಿನ್ನೆ ಪ್ರಧಾನಿ ಮೋದಿ ಅವರಿಂದ ಚಾಲನೆ ಗೊಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ವಿದ್ಯಾರ್ಥಿಯೊಬ್ಬ ಕೊಳಲಿನಲ್ಲಿ ವಂದೇ ಮಾತರಂ ಟ್ಯೂನ್ ನುಡಿಸಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಡಿಯೋ ವೈರಲ್ ಆಗುತ್ತಿದೆ.

ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ಇದು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಸಂಚರಿಸಲು ಸಜ್ಜಾಗಿದೆ.

ಈ ರೈಲಿನಲ್ಲಿ ವಿದ್ಯಾರ್ಥಿ ಕೊಳಲಿನಲ್ಲಿ ವಂದೇ ಮಾತರಂ ಟ್ಯೂನ್ ನುಡಿಸಿದನ್ನು ಭಾರತೀಯ ರೈಲ್ವೆ ಖಾತೆಗಳ ಸೇವೆ (IRAS) ಅಧಿಕಾರಿ ಅನಂತ್ ರೂಪನಗುಡಿ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಪ್ರಮೇಯ ಶೇಷಾದ್ರಿ ಕೊಳಲಿನಲ್ಲಿ ಅದ್ಭುತವಾಗಿ ವಂದೇ ಮಾತರಂ ರಾಗವನ್ನು ನುಡಿಸಿದ್ದಾರೆ ಎಂದು ಭಾರತೀಯ ರೈಲು ಇಲಾಖೆಯ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದೆ.

ಇತನ ಈ ಪ್ರತಿಭೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಒಳಭಾಗವು ವಿಮಾನದಂತೆ ಕಾಣುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!