ವರುಣ ಅಬ್ಬರ ಜೋರು: ಗುಡುಗು, ಸಿಡಿಲಿನ ಆರ್ಭಟಕ್ಕೆ ಕಂಗಾಲಾದ ಪ್ಯಾಟೆ ಮಂದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಆಗುತ್ತಿದ್ದಂತೆಯೇ ವರುಣ ಎಂಟ್ರಿಕೊಡುತ್ತಿದ್ದು, ಇಂದು ಸಹ ಮಳೆ ಅರ್ಭಟ ಜೋರಾಗಿದೆ.

ಇಂದು ಮಳೆಯಾಗಿದ್ದು, ಬೈಕ್ ಸವಾರರು, ವಾಹನ ಚಾಲಕರು ಕೊಂಚ ಸಮಸ್ಯೆ ಎದುರಿಸುವಂತೆ ಆಗಿದೆ. ರಸ್ತೆಗಳಲ್ಲಿ ಟ್ರಾಫಿಕ್ ಹೆಚ್ಚಾಗಿ ಆಗುತ್ತಿದ್ದು ಗಂಟೆಗಟ್ಟಲೇ ನಿಲ್ಲುವಂತೆ ಆಗುತ್ತಿದೆ.

ಹೆಬ್ಬಾಳ, ಸಂಜಯನಗರ, ಆರ್.ಟಿ ನಗರ, ಗಂಗಾನಗರ, ಮೇಖ್ರಿ ಸರ್ಕಲ್, ಶಿವಾನಂದ ಸರ್ಕಲ್, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಗಾಂಧಿನಗರ, ಕೆ.ಆರ್ ಸರ್ಕಲ್, ಕಾರ್ಪೋರೇಶನ್ ಹಾಗೂ ಮಾರ್ಕೆಟ್​ ಸೇರಿದಂತೆ ಸುತ್ತಮುತ್ತ ಭಾರೀ ಮಳೆಯಾಗಿದೆ.

ಬೆಂಗಳೂರಿಗೆ ಮುಂದಿನ ಮೂರು ಗಂಟೆ ಆರೆಂಜ್ ಅಲರ್ಟ್ ನೀಡಲಾಗಿದೆ. ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!