ವರುಣಾ ಕ್ಷೇತ್ರ ಇಂದು ಕಲರ್‌ಫುಲ್, ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಸಿನಿ ಸ್ಟಾರ‍್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಚುನಾವಣಾ ಪ್ರಚಾರ ರಂಗೇರಿದೆ.

ಎಲ್ಲ ನಾಯಕರುಗಳು ಮತದಾರರನ್ನು ಓಲೈಸಲು ಸಾಕಷ್ಟು ಪ್ರಯತ್ನ ಮಾಡಿದ್ದು, ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಇಂದು ವರುಣಾ ಕ್ಷೇತ್ರ ಕಲರ್‌ಫುಲ್ ಆಗಿರಲಿದ್ದು, ಸಿದ್ದರಾಮಯ್ಯ ಪರ ಸಿನಿ ತಾಯರೆಯರು ಪ್ರಚಾರದಲ್ಲಿ ತೊಡಗಲಿದ್ದಾರೆ.

ಸಿದ್ದರಾಮಯ್ಯ ಜೊತೆಗೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ, ನಟ ಶಿವರಾಜ್‌ಕುಮಾರ್, ಗೀತಾ ಶಿವರಾಜ್‌ಕುಮಾರ್ ಪ್ರಚಾರ ನಡೆಸಲಿದ್ದಾರೆ. ಮಾಜಿ ಶಾಸಕ ಮಧು ಬಂಗಾರಪ್ಪ, ಹಾಲಿ ಶಾಸಕರಾದ ಜಮೀರ್ ಅಹಮದ್ ಖಾನ್, ಯತೀಂದ್ರ ಸಿದ್ದರಾಮಯ್ಯ ಅಖಾಡಕ್ಕೆ ಧುಮುಕಲಿದ್ದಾರೆ.

ವರುಣಾದಲ್ಲಿ ಬೆಳಗ್ಗೆ 9 ಗಂಟೆಯಿಂದಲೇ ರೋಡ್ ಶೋ ಆರಂಭವಾಗಲಿದ್ದು, 12 ಗ್ರಾಮಗಳಲ್ಲಿ ಮತಬೇಟೆ ನಡೆಸಲಿದ್ದಾರೆ. ಈಗಾಗಲೇ ಒಂದು ರೌಂಡ್ಸ್ ಸಿದ್ದರಾಮಯ್ಯ ಪ್ರಚಾರ ಮುಗಿಸಿದ್ದಾರೆ. ಒದೀಗ ಮತ್ತೆ ಸಿದ್ದರಾಮಯ್ಯ ಸ್ಟಾರ್ ನಟ,ನಟಿಯರ ಜೊತೆ ಪ್ರಚಾರ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!