WEATHER | ಸದ್ಯಕ್ಕೆ ತಣ್ಣಗಾದ ವರುಣರಾಯ, ಮೇ 9ರ ನಂತರ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದಾದ್ಯಂತ ಮೇ 5ರಿಂದ ಮಳೆ ಕಡಿಮೆಯಾಗಿದೆ. ಬೆಂಗಳೂರು ಸೇರಿ ಹಲವೆಡೆ ಮೋಡಕವಿದ ವಾತಾವರಣ ಮುಂದುವರೆದಿದ್ದು ಮೇ 9ರ ಬಳಿಕ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ಕೋಲಾರ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಬೆಳಗಾವಿ, ಧಾರವಾಡದಲ್ಲಿ ಒಣಹವೆ ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here