ಕಳಸ, ಕುದುರೇಮುಖದಲ್ಲಿ ವರುಣಾರ್ಭಟ: ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಸಂಪರ್ಕ ಕಡಿತ ಭೀತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಮಳೆ ಆರ್ಭಟ ಮುಂದುವರಿದಿದ್ದು, ಹೆಬ್ಬಾಳೆ ಸೇತುವೆಗೆ ಈಗ ಮುಳುಗುಡೆ ಭೀತಿ ಆವರಿಸಿದೆ.
ಇಲ್ಲಿನ ಕುದುರೆಮುಖ ಭಾಗದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಲವು ಆತಂಕಗಳನ್ನು ಸೃಷ್ಟಿಸಿದೆ.

ಕಳಸ, ಕುದುರೆಮುಖಗಳಲ್ಲಿ ಶನಿವಾರ ರಾತ್ರಿಯಿಂದ ಮಳೆಯಾಗುತ್ತಿದ್ದು, ಜೀವನದಿ ಭದ್ರಾ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ನೀರು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆ ಭೀತಿ ಎದುರಿಸುತ್ತಿದ್ದು, ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಹಾಗೂ ಕಳಸ ನಡುವಿನ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.
ಮಳೆಗಾಲ ಆರಂಭವಾದರೆ ವರ್ಷಕ್ಕೆ ಕನಿಷ್ಟ 10 ಬಾರಿ ಈ ಸೇತುವೆ ಮುಳುಗಡೆಯಾಗುತ್ತಿದ್ದು, ಪರಿಹಾರಕ್ಕಾಗಿನ ಸ್ಥಳೀಯರ ಬೇಡಿಕೆ ಇನ್ನೂ ಈಡೇರಿಲ್ಲ. 2019ರಲ್ಲಿ ಈ ಸೇತುವೆ ಬರೋಬ್ಬರಿ ನಾಲ್ಕು ದಿನಗಳ ಕಾಲ ನಿರಂತರವಾಗಿ ಮುಳುಗಡೆ ಕಂಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!