ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ವರುಣನ ಎಂಟ್ರಿಯಾಗಿದೆ. ಭಾರೀ ಮಳೆಯಿಂದಾಗಿ ಮಂಡ್ಯ ಸಾಹಿತ್ಯ ಸಮ್ಮೇಳನವೇ ಅಸ್ತವ್ಯಸ್ತಗೊಂಡಿದೆ.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ 2ನೇ ದಿನದಂದು ಸಂಜೆ 6.30ಗಂಟೆಗೆ ಶುರುವಾದ ಮಳೆ, ಅರ್ಧಗಂಟೆಗೂ ಹೆಚ್ಚುಕಾಲ ಎಡಬಿಡದೇ ಸುರಿಯಿತು. ಮಳೆಯಿಂದಾಗಿ ವೇದಿಕೆಯ ಆಸುಪಾಸು ಸಂಪೂರ್ಣ ಕೆಸರು ಗದ್ದೆಯಂತಾಗಿದೆ.
ಸನ್ಮಾನ, ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ಜನರಿಗೆ ಭಾರೀ ಮಳೆಯಿಂದಾಗಿ ಅಡ್ಡಿಯಾದಂತೆ ಆಗಿದೆ.