ಬೆಂಗಳೂರಿನಲ್ಲಿ ವರುಣನ ಆರ್ಭಟ: ರಸ್ತೆಗಳು ಜಲಾವೃತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌  
ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುತ್ತಿದೆ. ನಗರದಲ್ಲಿ ಪ್ರತಿದಿನ ಸಂಜೆ ಗುಡುಗು ಸಹಿತ ಮಳೆ ನಗರದಲ್ಲಿ ಸುರಿಯುತ್ತಿದೆ.
ಶನಿವಾರ ಸಂಜೆ ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆ ಆರಂಭವಾಗಿದೆ. ಮಳೆ ನೀರು ರಸ್ತೆಯಲ್ಲಿ ತುಂಬಿದ್ದು, ವೀಕೆಂಡ್‌ನಲ್ಲಿ ಹೊರ ಬಂದಿದ್ದ ಜನರು ಮಳೆಯಲ್ಲಿ ಸಿಲುಕಿದ್ದಾರೆ.
ಜಯನಗರ, ಬಸವನಗುಡಿ, ಮೆಜೆಸ್ಟಿಕ್, ಹನುಮಂತನಗರ, ವಿದ್ಯಾಪೀಠ ಸರ್ಕಲ್, ಮೈಸೂರು ರಸ್ತೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿವೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ನಗರದಲ್ಲಿ ಮಳೆಯಾಗುತ್ತಿದೆ. ನಗರದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ, ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!