ಬೆಂಗಳೂರಿನಲ್ಲಿ ವರುಣನ ಆರ್ಭಟ: ಗುಡುಗು ಸಿಡಿಲಿನ ಅಬ್ಬರಕ್ಕೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನಲ್ಲಿ ಇಂದು ಸಂಜೆ ಧಾರಾಕಾರ ಮಳೆಯಾಗಿದ್ದು, ಗುಡುಗು-ಸಿಡಿಲಿನ ಅಬ್ಬರಕ್ಕೆ ಸಿಲಿಕಾನ್ ಸಿಟಿ ಮಂದಿ ಪರದಾಡಿದ್ದಾರೆ.
ನಗರದ ಶಾಂತಿನಗರ, , ಮೈಸೂರ್ ಬ್ಯಾಂಕ್ ಸರ್ಕಲ್, ಕೆಆರ್ ಮಾರ್ಕೆಟ್, ಡಬಲ್ ರೋಡ್, ಕಾರ್ಪೋರೇಷನ್ ಬಳಿ ಭರ್ಜರಿ ಮಳೆಯಾಗುತ್ತಿದೆ.ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರರು ಹರಸಾಹಸ ಪಟ್ಟರು.
ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಸಂಜೆ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ ಸುರಿಯುತ್ತಿದೆ.
ಇನ್ನೂ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!