ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯಕ್ಕೆ ವರುಣನ ಆಗಮನವಾಗಿದ್ದು, ಪಂದ್ಯ ಟೈ ಗೆ ಅಂತ್ಯಗೊಂಡಿದೆ. ಈ ಮೂಲಕ ಟಿ20 ಸರಣಿ ಟೀಂ ಇಂಡಿಯಾ ಪಾಲಾಗಲಿದೆ.
ಮೊದಲ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 161 ರನ್ಗಳ ಸವಾಲಿನ ಗುರಿ ನೀಡಿತ್ತು. ಇದನ್ನು ಬೆನ್ನತ್ತಿದ್ದ ಟೀಮ್ ಇಂಡಿಯಾ 9 ಓವರ್ ಅಂತ್ಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 75 ರನ್ ಬಾರಿಸಿದ್ದು ಮಳೆಯ ಆಗಮನವಾಗಿದೆ.
ಇನ್ನೂ 11 ಓವರ್ಗಳಲ್ಲಿ ಟೀಂ ಇಂಡಿಯಾ 86 ರನ್ ಬಾರಿಸಬೇಕಿತ್ತು. ಆದರೆ ಮಳೆ ಕಡಿಮೆಯಾಗದ ಕಾರಣ ಡಿಎಲ್ ಎಸ್ ನಿಯಮ ಮೂಲಕ ಮ್ಯಾಚ್ ಅನ್ನು ಟೈ ಎಂದು ಘೋಷಿಸಿಲಾಗಿದ್ದು, ಟಿ20 ಸರಣಿ ಟೀಂ ಇಂಡಿಯಾ ಪಾಲಾಗಲಿದೆ
ಭಾರತ ತಂಡ ಇಶಾನ್ ಕಿಶನ್ ಕೇವಲ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ರಿಷಭ್ ಪಂತ್ ಬ್ಯಾಟಿಂಗ್ 11 ರನ್ಗಳಿಗೆ ಸೀಮಿತವಾಯಿತು. ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಖಾತೆ ತೆರೆಯುವ ಮುನ್ನವೇ ಟಿಮ್ ಸೌಥಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.ಈ ವೇಳೆ 4ನೇ ವಿಕೆಟ್ಗೆ ಜತೆಯಾದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ 39 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಆದರೆ ಸೂರ್ಯಕುಮಾರ್ ಯಾದವ್ ಕೇವಲ 13 ರನ್ ಬಾರಿಸಿ ಇಶ್ ಸೋಧಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ನಾಯಕ ಹಾರ್ದಿಕ್ ಪಾಂಡ್ಯ ಕೇವಲ 18 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಆಕರ್ಷಕ ಸಿಕ್ಸರ್ ಸಹಿತ ಅಜೇಯ 30 ರನ್ ಬಾರಿಸಿಗ್ರೀಸ್ ನಲ್ಲಿ ಇದ್ದರು.