ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಏಕಾಏಕಿಯಾಗಿ ಸುರಿದ ಧಾರಾಕಾರ ಮಳೆಗೆ (Heavy Rain) ವಾಹನ ಸವಾರರು ಪರದಾಟ ನಡೆಸಿದರು. ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಕೆರೆಯಂತಾಗಿವೆ.
ಇತ್ತ ಕಾರು ಮಳೆಗೆ ಮುಳುಗಿದ್ದು , ಕಾರಿನಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಬೆಂಗಳೂರು ಕೆ ಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಮಧ್ಯಾಹ್ನವೇ ಧಾರಾಕಾರ ಮಳೆಯಾಗುವ ಮೂಲಕ ತಂಪೆರೆದಿದೆ. ಅಲ್ಲದೇ ಕೆಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗಿರುವುದಾಗಿ ವರದಿಯಿಂದ ತಿಳಿದು ಬಂದಿದೆ.
ಮೆಜೆಸ್ಟಿಕ್, ಕೆ.ಆರ್ ಮಾರುಕಟ್ಟೆ, ಮಲ್ಲೇಶ್ವರಂ, ನಾಗರಭಾವಿ, ಕಾಮಾಕ್ಷಿಪಾಳ್ಯ, ಗಿರಿನಗರ, ಜಯನಗರ, ವಿಜಯನಗರ, ಜೆ.ಪಿ ನಗರ, ನಂದಿನಿ ಲೇಔಟ್, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ತಗ್ಗು ಪ್ರದೇಶದ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ, ವಾಹನ ಸವಾವರು ಮುಂದೆ ಸಾಗದಂತೆ ಟ್ರಾಫಿಕ್ ಜಾಮ್ ಉಂಟಾಗಿದೆ.ನಗರದಲ್ಲಿ ಇಂದು ಭಾರೀ ಮಳೆಯಿಂದಾಗಿ ಬೃಹತ್ ಗಾತ್ರದ ಮರವೊಂದು ಬೈಕ್, ಕಾರಿನ ಮೇಲೆ ಬಿದ್ದು ಜಖಂ ಗೊಂಡಿರುವಂತ ಘಟನೆ ಕುಮಾರ ಕೃಪಾ ರಸ್ತೆಯ ಚಿತ್ರಕಲಾ ಪರಿಷತ್ ಮುಂಭಾಗದಲ್ಲಿ ನಡೆದಿದೆ.