Friday, June 2, 2023

Latest Posts

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: ಇಂದಿನ RCB ಮ್ಯಾಚ್ ರದ್ದಾಗುತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: ಇಂದಿನ RCB ಮ್ಯಾಚ್ ರದ್ದಾಗುತ್ತಾ?

ಬೆಂಗಳೂರು ನಗರದಲ್ಲಿ ಭಾರೀ ಮಳೆಗೆ ರಸ್ತೆಗಳು ಕೆರೆಯಂತಾಗಿವೆ.
ಮಳೆಯ ಆರ್ಭಟ ಜೋರಾದ ಹಿನ್ನೆಲೆ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ (GT) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹೈವೋಲ್ಟೇಜ್ ಪಂದ್ಯ ರದ್ದಾಗುವ ಸಾಧ್ಯತೆ ಇದೆ.

ಭಾರೀ ಮಳೆ ಹಿನ್ನೆಲೆಯಲ್ಲಿ ಮೈದಾನದ ತುಂಬಾ ನೀರು ಆವರಿಸಿದೆ. ಜೊತೆಗೆ ಪ್ರೇಕ್ಷಕರು ಕುಳಿತುಕೊಳ್ಳುವ ಆಸನಗಳ ಸ್ಥಳ ಹಾಗೂ ವಿಐಪಿ ಕ್ಯಾಬಿನ್‌ಗಳಿಗೂ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ಲೀಗ್ ಹಂತದ ಕೊನೆಯ ಪಂದ್ಯ ರದ್ದಾಗುವ ಸಾಧ್ಯತೆಯಿದೆ.

ಭಾನುವಾರ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಕೊನೆಯ ಲೀಗ್ ಪಂದ್ಯ ಇದ್ದು, ಆರ್‌ಸಿಬಿ ಪ್ಲೇ ಆಫ್ ತಲುಪಲು ಈ ಪಂದ್ಯ ನಿರ್ಣಾಯಕವಾಗಿದೆ. ಉತ್ತಮ ರನ್‌ರೇಟ್‌ನೊಂದಿಗೆ 4ನೇ ಸ್ಥಾನ ಖಚಿತಪಡಿಸಿಕೊಂಡಿರುವ ಆರ್‌ಸಿಬಿ ತಂಡಕ್ಕೆ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಒಂದು ವೇಳೆ ಪಂದ್ಯ ಸಂಪೂರ್ಣ ರದ್ದಾದರೆ, ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಸಹ ಸೋಲಬೇಕಾಗುತ್ತದೆ. ಮುಂಬೈ ಇಂಡಿಯನ್ಸ್ ಗೆದ್ದರೆ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಕಳೆದುಕೊಳ್ಳಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!