ಬೆಂಗಳೂರಿನಲ್ಲಿ ವರುಣನ ಆರ್ಭಟ: ನಾಳೆ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಬೆಂಗಳೂರು ನಗರದಲ್ಲಿ ವರುಣನ ಆರ್ಭಟವಾಗುತ್ತಿದ್ದು, ನಾಳೆಯೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ , ಮುಂಜಾಗ್ರತಾ ಕ್ರಮವಾಗಿ ನಾಳೆ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಕಾಲೇಜುಗಳಿಗೆ ರಜೆ ಇಲ್ಲ ಎಂಬುದಾಗಿ ಆದೇಶದಲ್ಲಿ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಕೂಡ ಮಳೆಯಾಗಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ.ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ ಇರುವುದಿಲ್ಲ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!