ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವರುಣನ ಅಬ್ಬರ: ಅಂಡರ್​ಪಾಸ್​​ಗಳಲ್ಲಿ ಸಂಚರಿಸಬೇಡಿ ಎಂದ ಪೊಲೀಸರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತೆ ಭಾರೀ ಮಳೆ (Bangalore Rains) ಸುರಿದಿದೆ.

ನಗರದ ಮಲ್ಲೇಶ್ವರಂ, ಮೆಜೆಸ್ಟಿಕ್, ಕಾರ್ಪರೇಷನ್, ಗಿರಿನಗರ, ಶಾಂತಿನಗರ, ರಿಚ್​ಮಂಡ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಗಾಳಿ ಸಹಿತ ವರುಣನ ಆರ್ಭಟವಾಗಿದೆ.

ಈ ಮಧ್ಯೆ, ಅಂಡರ್​ಪಾಸ್​​ಗಳಲ್ಲಿ ಸಂಚರಿಸಬೇಡಿ ಎಂದು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಭಾನುವಾರ ಸಂಜೆ ಸುರಿದಿದ್ದ ಭಾರೀ ಮಳೆಯಿಂದಾಗಿ ಕೆಆರ್ ಸರ್ಕಲ್ ಅಂಡರ್​ಪಾಸ್​​ನಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಅದರಲ್ಲಿ ಕಾರು ಸಿಲುಕಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟಿದ್ದರು.ಹೀಗಾಗಿ ಮಳೆಯ ಕಾರಣ ಸಾರ್ವಜನಿಕರು ವಿಧಾನಸೌಧದ ಸುತ್ತಲಿನ 6 ಕಿಮೀ ವ್ಯಾಪ್ತಿಯಲ್ಲಿರುವ ಅಂಡರ್​ಪಾಸ್​​ಗಳಲ್ಲಿ ಸಂಚರಿಸಬಾರದು ಎಂದು ಬೆಂಗಳೂರು ನಗರ ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ 2 ದಿನಗಳಿಂದ ಸುರಿದ ಮಳೆಯಿಂದಾಗಿ ಕಬ್ಬನ್​ಪಾರ್ಕ್​ನಲ್ಲಿ 40ಕ್ಕೂ ಹೆಚ್ಚು ಮರಗಳು ಉರುಳಿ ಬಿದ್ದಿವೆ. ಕಬ್ಬನ್ ಉದ್ಯಾನವನದಲ್ಲಿ ಒಟ್ಟು 2 ಸಾವಿರಕ್ಕೂ ಹೆಚ್ಚು ಮರಗಳಿವೆ. ರಸ್ತೆಯ ಮೇಲೆ ಬಿದ್ದಿದ್ದ ಎಲ್ಲ ಮರಗಳನ್ನು ತೆರವುಗೊಳಿಸಿದ್ದೇವೆ. ಇನ್ನೆರಡು ದಿನ ಭಾರಿ ಮಳೆಯ ಮುನ್ಸೂಚನೆ ಇದೆ ಎಂದು ಕಬ್ಬನ್ ಪಾರ್ಕ್ ತೋಟಗಾರಿಕೆ ಉಪನಿರ್ದೇಶಕ ಬಾಲಕೃಷ್ಣ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!