Monday, October 13, 2025

Vastu | ಹಣಕಾಸಿನ ಸಮಸ್ಯೆಗೆ ಪರಿಹಾರ ಬೇಕಾ? ಹಾಗಿದ್ರೆ ಈ ವಾಸ್ತು ಸಲಹೆ ನಿಮಗಾಗಿ

ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ದಿಕ್ಕಿಗೂ ವಿಶೇಷ ಸ್ಥಾನಮಾನ ನೀಡಲಾಗಿದೆ. ಮನೆಯಲ್ಲಿ ವಾಯುವ್ಯ, ಆಗ್ನೇಯ, ನೈಋತ್ಯ ಮತ್ತು ಈಶಾನ್ಯ ದಿಕ್ಕುಗಳು ಮಹತ್ವ ಹೊಂದಿದ್ದು, ಅವುಗಳನ್ನು ಕ್ರಮವಾಗಿ ವಾಯು ಮೂಲ, ಅಗ್ನಿ ಮೂಲ ಮತ್ತು ಕುಬೇರ ಮೂಲ ಎಂದು ಕರೆಯಲಾಗುತ್ತದೆ. ಇದರಲ್ಲಿ ಈಶಾನ್ಯ ದಿಕ್ಕಿಗೆ ವಿಶೇಷ ಮಹತ್ವವಿದೆ. ಏಕೆಂದರೆ, ಇದನ್ನು ಕುಬೇರನ ವಾಸಸ್ಥಾನವೆಂದು ಪರಿಗಣಿಸಲಾಗುತ್ತದೆ. ಕುಬೇರನು ಸಂಪತ್ತಿನ ಅಧಿಪತಿ ಎನ್ನುವ ನಂಬಿಕೆ ಇರುವುದರಿಂದ, ಈ ದಿಕ್ಕನ್ನು ಸ್ವಚ್ಛವಾಗಿಡುವುದು ಅತ್ಯಂತ ಮುಖ್ಯವಾಗಿದೆ.

ಈಶಾನ್ಯ ದಿಕ್ಕಿನಲ್ಲಿ ಪೂಜಾ ಕೊಠಡಿಯನ್ನು ಸ್ಥಾಪಿಸುವುದು ಅತ್ಯಂತ ಶುಭಕರವೆಂದು ಹೇಳಲಾಗಿದೆ. ಈ ದಿಕ್ಕಿನಲ್ಲಿ ಯಾವಾಗಲೂ ಪವಿತ್ರತೆ ಹಾಗೂ ಸ್ವಚ್ಛತೆಯನ್ನು ಕಾಪಾಡಬೇಕು. ಭಾರವಾದ ವಸ್ತುಗಳನ್ನು ಈಶಾನ್ಯ ದಿಕ್ಕಿನಲ್ಲಿ ಇಡುವುದನ್ನು ವಾಸ್ತು ಶಾಸ್ತ್ರದಲ್ಲಿ ತಪ್ಪು ಎಂದು ಪರಿಗಣಿಸಲಾಗಿದೆ, ಏಕೆಂದರೆ ಅದು ಆರ್ಥಿಕ ಸಮಸ್ಯೆಗಳನ್ನು ತರಬಹುದು. ಮನೆಯಲ್ಲಿ ಕುಬೇರ ಯಂತ್ರವನ್ನು ಸ್ಥಾಪಿಸುವುದರಿಂದ ಆರ್ಥಿಕ ಸಮೃದ್ಧಿ ಹೆಚ್ಚುತ್ತದೆ ಎಂಬ ನಂಬಿಕೆಯಿದೆ.

ಹೊಸ ಮನೆ ನಿರ್ಮಿಸುವಾಗ ಈಶಾನ್ಯ ದಿಕ್ಕಿನಲ್ಲಿ ಯಾವುದೇ ಅಡ್ಡಿ-ತಡೆಗಳಿಲ್ಲದಂತೆ ನೋಡಿಕೊಳ್ಳುವುದು ಬಹಳ ಮುಖ್ಯ. ಈ ಭಾಗದಲ್ಲಿ ಮೆಟ್ಟಿಲುಗಳು, ಚಪ್ಪಲಿ, ಕಸ ಅಥವಾ ಸ್ನಾನಗೃಹ ನಿರ್ಮಿಸುವುದನ್ನು ತಪ್ಪಿಸಬೇಕು. ಇವು ಮನೆಯ ಆರ್ಥಿಕ ಸ್ಥಿತಿ ಮತ್ತು ಶಾಂತಿಗೆ ಹಾನಿ ಮಾಡುತ್ತವೆ ಎಂದು ವಾಸ್ತು ಹೇಳುತ್ತದೆ.

ಹಣವನ್ನು ಇಡುವ ತಿಜೋರಿಯನ್ನು ಸದಾ ಉತ್ತರ ದಿಕ್ಕಿನಲ್ಲಿ ಇಡಬೇಕು. ಹೀಗೆ ಮಾಡಿದರೆ ಆರ್ಥಿಕ ಲಾಭ ಹೆಚ್ಚುತ್ತದೆ ಎಂದು ನಂಬಲಾಗಿದೆ. ಮನೆಯನ್ನು ಪ್ರತಿದಿನ ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ಬೆಳಿಗ್ಗೆ-ಸಂಜೆ ದೀಪ ಹಚ್ಚುವುದು ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸಲು ಸಹಾಯಕವಾಗುತ್ತದೆ.(Disclaimer: ಈ ಲೇಖನವು ಸಾರ್ವಜನಿಕ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಯಾಧಾರಿತವಾಗಿದೆ.)

error: Content is protected !!