ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಕುಸಿದು ಬಿದ್ದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾಯ ಸ್ವಾಮೀಜಿ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಕುಸಿದು ಬಿದ್ದು ನಿಧನ ಹೊಂದಿದ ಘಟನೆ ಬುಧವಾರ ನಡೆದಿದೆ.

ಸ್ವಾಮೀಜಿಯು ಬೆಂಗಳೂರಿನಿಂದ ಯಾದಗಿರಿಗೆ ತೆರಳಲು ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ತದನಂತರ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಲಿಂಗೈಕ್ಯರಾಗಿದ್ದಾರೆ.

ಶ್ರೀಗಳು ಮುಂದಿನ ತಿಂಗಳಲ್ಲಿ ತಮ್ಮ 25ನೇ ಪಟ್ಟಾಧಿಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರು, ಈ ಕಾರ್ಯಕ್ರಮಕ್ಕೆ ಬಿ ವೈ ವಿಜಯೇಂದ್ರ- ಸೇರಿ ಹಲವು ಗಣ್ಯರನ್ನು ಆಹ್ವಾನಿಸಲು ಬೆಂಗಳೂರಿಗೆ ಆಗಮಿಸಿದ್ದರು. ಆಹ್ವಾನ ನೀಡಿ ಯಾದಗಿರಿಗೆ ಹಿಂದಿರುಗುವ ವೇಳೆ ಈ ದುರ್ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!