ವಿಷಕಾರಿ ಹಾವು ಕಡಿತ: ರೈತನ ಸಾವು

ಹೊಸದಿಗಂತ ವರದಿ ಅಂಕೋಲಾ:

ವಿಷಕಾರಿ ಹಾವು ಕಡಿದು ರೈತನೋರ್ವ ಮೃತ ಪಟ್ಟ ಘಟನೆ ತಾಲೂಕಿನ ಹೆಗ್ರೆಯಲ್ಲಿ ರವಿವಾರ ಸಂಜೆ ನಡೆದಿದೆ.

ಹೆಗ್ರೆ ನಿವಾಸಿ ಮಾದೇವ ನಾರಾಯಣ ಗೌಡ (47) ಮೃತ ವ್ಯಕ್ತಿಯಾಗಿದ್ದು ಭತ್ತದ ಗದ್ದೆಯಲ್ಲಿ ನೀರು ಬಿಟ್ಟು ಕೃಷಿ ಚಟುವಟಿಕೆ ನಡೆಸಿ ಸಂಜೆ 7ಗಂಟೆ ಸುಮಾರಿಗೆ ಮನೆಗೆ ಮರಳುತ್ತಿರುವ ಸಂದರ್ಭದಲ್ಲಿ ಬಲಕಾಲಿನ ಪಾದದ ಮೇಲ್ಬಾಗದಲ್ಲಿ ಯಾವುದೋ ಜಾತಿಯ ಹಾವು ಕಚ್ಚಿದ್ದು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಕುಮಟಾ ಸರ್ಕಾರಿ ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭದಲ್ಲಿ ರಾತ್ರಿ 8.15 ರ ಸುಮಾರಿಗೆ ಹಿತ್ತಲಮಕ್ಕಿ ಸಮೀಪ ತಲುಪುತ್ತಿದ್ದಂತೆ ವಾಂತಿ ಮಾಡಿಕೊಂಡು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!