ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಶರತ್ ಬಾಬು (71) ಇಂದು ಹೈದರಾಬಾದ್ನ ಎಐಜಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಶರತ್ ಬಾಬು ಅವರಿಗೆ ಹೈದರಾಬಾದ್ನ ಎಐಜಿ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಶರತ್ ಬಾಬು ಅವರು ಕಿಡ್ನಿ, ಲಂಗ್ಸ್, ಲಿವರ್ ಮತ್ತಿತರ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ವೆಂಟಿಲೇಟರ್ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕಳೆದೆರಡು ದಿನಗಳಿಂದ ಶರತ್ ಬಾಬು ಆರೋಗ್ಯ ಪರಿಸ್ಥಿತಿ ತೀರಾ ಚಿಂತಾಜನಕವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಕನ್ನಡದ ʼಅಮೃತವರ್ಷಿಣಿʼ, ‘ನೀಲಾ’, ‘ತುಳಸಿದಳ’ ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ನಟಿಸುವ ಮೂಲಕ ಅಪಾರ ಪ್ರಮಾಣದ ಅಭಿಮಾನಿಗಳನ್ನು ಸಂಪಾದಿಸಿದ್ದ ಪ್ರತಿಭಾನ್ವಿತ ನಟರಾಗಿದ್ದವರು ಶರತ್ ಬಾಬು.
ಸ್ವಾತಿ ಮುತ್ಯಂ, ಸಾಗರ ಸಂಗಮಂ ಸೇರಿದಂತೆ 250ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ನಟನಾಗಿ ಮಾತ್ರವಲ್ಲದೇ ವಿಲನ್, ಪೋಷಕ ಪಾತ್ರಗಳಲ್ಲಿ ಕೂಡ ಕಾಣಿಸಿಕೊಂಡಿದ್ದಾರೆ. ಕಿರುತೆರೆಯಲ್ಲೂ ಕೂಡ ಮನೆ ಮಾತಾಗಿದ್ರು ಶರತ್ ಬಾಬು.