ಕಲಬುರಗಿಯಲ್ಲಿ ಸಚಿವ ಮುರುಗೇಶ್ ನಿರಾಣಿಗೆ ರಾಖಿ ಕಟ್ಟಿದ ವಿಹಿಂಪ ಸದಸ್ಯರು

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಹಾಗೂ ಕಲಬುರಗಿಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರು ಕಲಬುರಗಿಯಲ್ಲಿ ಭಾನುವಾರ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಈ ವೇಳೆ ವಿಶ್ವ ಹಿಂದೂ ಪರಿಷತ್ ಸದಸ್ಯರು ಸಚಿವರಿಗೆ ರಾಖಿಯನ್ನು ಕಟ್ಟಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರಕ್ಷಾ ಬಂಧನ ಸಹೋದರತೆಯ ಹಾಗೂ ಭಾತೃತ್ವದ ಮಹತ್ವವನ್ನು ಸಾರುವ ಪರಿಶುದ್ಧವಾದ ಹಬ್ಬ. ಇಂತಹ ಆಚರಣೆಗಳಿಂದಲೇ ಭಾರತವು ಇಂದು ವಿಶ್ವಮಟ್ಟದಲ್ಲಿ ತನ್ನ ಸಂಬಂಧಗಳ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ. ಕಲಬುರಗಿಯಲ್ಲಿಂದು ವಿಶ್ವ ಹಿಂದೂ ಪರಿಷತ್ ಸಹೋದರರ ಪ್ರೀತಿಯು ರಕ್ಷಾ ಬಂಧನಕ್ಕೆ ಮತ್ತಷ್ಟು ಮೆರುಗು ನೀಡಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!