ಸಂತ್ರಸ್ತೆಯ ಅಪಹರಣ ಕೇಸ್: ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆಯಾಗಿದೆ.

ಸಂತ್ರಸ್ತೆಯ ಮಗ ಕೊಟ್ಟ ದೂರಿನಲ್ಲಿ ಭವಾನಿ ಹೆಸರು ಉಲ್ಲೇಖವಾಗಿದ್ದು, ಎಫ್‍ಐಆರ್ ದಾಖಲಾಗಿದೆ. ಈ ಸಂಬಂಧ ಎಸ್‍ಐಟಿ ಎರಡು ಬಾರಿ ನೋಟಿಸ್ ಕೊಟ್ಟರೂ ಉತ್ತರಿಸದೇ ಚಳ್ಳೆಹಣ್ಣು ತಿನ್ನಿಸುತ್ತಿರುವ ಭವಾನಿಗೆ ಬಂಧನದ ಭೀತಿ ಎದುರಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ಸೆಷನ್ಸ್ ಕೋರ್ಟ್, ನಾಳೆ (ಬುಧವಾರ) ಬೆಳಗ್ಗೆ 11 ಗಂಟೆಗೆ ಮುಂದೂಡಿದೆ.

ಇತ್ತ ಎಸ್‍ಐಟಿ ಆಕ್ಷೇಪಣಾ ಅರ್ಜಿ ಸಲ್ಲಿಸೋಕೆ ಕಾಲಾವಕಾಶ ಕೇಳಿದೆ. ಭವಾನಿ ಅವರಿಗೆ ಮೂರು ನೋಟಿಸ್ ನೀಡಲಾಗಿದೆ. ಇದೂವರೆಗೂ ವಿಚಾರಣೆಗೆ ಹಾಜರಾಗಿಲ್ಲ ಅಂತ ಎಸ್‍ಪಿಪಿ ಜಗದೀಶ್ ವಾಡ ಮಂಡಿಸಿದರು. ಭವಾನಿ ಈ ಪ್ರಕರಣದ ಆರೋಪಿ ಅಂತ ಎಫ್‍ಐಆರ್ ನಲ್ಲಿ ಇದ್ಯಾ ಅಂತ ಜಡ್ಜ್ ಪ್ರಶ್ನಿಸಿದ್ರು. ಇದೂವರೆಗೂ ಎಫ್‍ಐಆರ್ ಅಲ್ಲಿ ಇಲ್ಲ. ಇನ್ನು ದಿನದಿಂದ ದಿನಕ್ಕೆ ಆರೋಪಿಗಳ ಸಂಖ್ಯೆ ಹೆಚ್ಚಿಸ್ತಾ ಇದ್ದಾರೆ ಎಂದು ಸಂದೇಶ್ ಚೌಟ ಭವಾನಿ ಪರ ವಾದಿಸಿದರು. ಎಸ್‍ಐಟಿ ಆಕ್ಷೇಪಣೆಗೆ ಕೋರಿದ ಕಾರಣ ವಿಚಾರಣೆಯನ್ನು ನಾಳೆಗೆ ಮುಂದೂಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!