ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.
ಆರು ಕ್ಷೇತ್ರಗಳ ಪೈಕಿ ಒಂದನ್ನು ಜೆಡಿಎಸ್ ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನ ಪರಿಷತ್ ನ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಸ್ಪರ್ಧಿಸಲಿದೆ.
ಈಶಾನ್ಯ ಜಿಲ್ಲಾ ಹಳೆ ವಿದ್ಯಾರ್ಥಿ ಪರಿಷತ್ ನಿಂದ ಅಮರನಾಥ್ ಪಾಟೀಲ್, ಪರಿಷತ್ನ ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಪರಿಷತ್ನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಪರಿಷತ್ನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಮತ್ತು ವಿಧಾನಪರಿಷತ್ನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಆಯ್ಕೆಯಾಗಿದ್ದಾರೆ.