ಹೊಸದಿಗಂತ ಡಿಜಿಟಲ್ ಡೆಸ್ಕ್:
ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ವಿಧಾನ ಪರಿಷತ್ ಟಿಕೆಟ್ ಸಿಗುವುದು ಹೆಚ್ಚು ಕಡಿಮೆ ಖಚಿತವಾಗಿದೆ. ಮೈಸೂರಿನ ಮೈಲಾರಿ ಹೋಟೆಲ್ನಲ್ಲಿ ದೋಸೆ ತಿಂದ ಬಳಿಕ ಮಾತಾಡಿದ ಸಿಎಂ ಸಿದ್ದರಾಮಯ್ಯ ಈ ಸುಳಿವು ನೀಡಿದ್ದಾರೆ.
ಈ ಹೇಳಿಕೆಗೆ ಪೂರಕವಾಗಿ ನಮ್ಮ ಹೈಕಮಾಂಡ್ ನನ್ನ ಮಗ ಯತೀಂದ್ರ ಅವರನ್ನು ಎಂಎಲ್ ಸಿ ಮಾಡುವುದಾಗಿ ಹೇಳಿರುವುದಾಗಿ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ಈಗ ಅವರ ನಿರ್ಧಾರ ಏನು ಅಂತ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದ ಸ್ಪರ್ಧಿಸುತ್ತೇನೆ ಎಂದು ನಿರ್ಧರಿಸಿದಾಗ ಕ್ಷೇತ್ರವನ್ನು ತೊರೆಯುವಂತೆ ಸಲಹೆ ನೀಡಲಾಗಿತ್ತು ಎಂದು ಬರೆದುಕೊಂಡಿದ್ದಾರೆ.
ನಮ್ಮ ಹೈಕಮಾಂಡ್ನವರು ನನ್ನ ಪುತ್ರ ಡಾ|| ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಈಗಿನ ಅವರ ನಿರ್ಧಾರ ಏನೆಂದು ನನಗೆ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದಲೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. 2/4#ಮೈಸೂರು #ಮಾಧ್ಯಮಹೇಳಿಕೆ
— Siddaramaiah (@siddaramaiah) May 24, 2024