ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್ ನ ಯಂಗ್ ಸೆನ್ಸೇಷನ್ ವಿಜಯ್ ದೇವರಕೊಂಡ ಅವರಿಗೆ ಜೀವ ತುಂಬಿದ ಚಿತ್ರ ಅರ್ಜುನ್ ರೆಡ್ಡಿ ಆದರೂ ಅವರನ್ನು ಸ್ಟಾರ್ ಹೀರೋಗಳ ಎದುರು ತಂದು ನಿಲ್ಲಿಸಿದ ಚಿತ್ರ ‘ಗೀತ ಗೋವಿಂದಂ’. 2018ರಲ್ಲಿ ಕೇವಲ 5 ಕೋಟಿ ಬಜೆಟ್ ನಲ್ಲಿ ತಯಾರಾದ ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 130 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಪರಶುರಾಮ್ ನಿರ್ದೇಶನದ ಈ ರೊಮ್ಯಾಂಟಿಕ್ ಕಾಮಿಡಿ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ವಿಜಯ್ ಮತ್ತು ರಶ್ಮಿಕಾ ನಡುವಿನ ಕೆಮಿಸ್ಟ್ರಿ ಪ್ರೇಕ್ಷಕರನ್ನು ಆಕರ್ಷಿಸಿತ್ತು. ವಿಜಯ್ ದೇವರಕೊಂಡ ಮತ್ತೊಮ್ಮೆ ನಿರ್ದೇಶಕ ಪರಶುರಾಮ್ ಜೊತೆ ಕೈ ಜೋಡಿಸಲಿದ್ದಾರೆ.
ಟಾಲಿವುಡ್ ಸ್ಟಾರ್ ನಿರ್ಮಾಪಕ ದಿಲ್ ರಾಜು ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ದಿಲ್ ರಾಜು ನಿನ್ನೆ ವಿಜಯ್ ಮತ್ತು ಪರಶುರಾಮ್ ಜೊತೆಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಇದರಿಂದ ವಿಜಯ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಈ ಬ್ಲಾಕ್ ಬಸ್ಟರ್ ಕಾಂಬಿನೇಷನ್ ಮತ್ತೆ ಒಂದಾಗಿರುವುದು ಭಾರೀ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ರಶ್ಮಿಕಾ ಅವರನ್ನು ನಾಯಕಿಯಾಗಿ ತೆಗೆದುಕೊಳ್ಳುತ್ತಾರಾ ಎಂಬುದನ್ನು ನೋಡಬೇಕು.
We are getting back together.@ParasuramPetla @SVC_official https://t.co/pxT6NqHWXc
— Vijay Deverakonda (@TheDeverakonda) February 5, 2023
ಸದ್ಯ ವಿಜಯ್ ದೇವರಕೊಂಡ ಖುಷಿ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಅರ್ಧದಷ್ಟು ಚಿತ್ರೀಕರಣ ಮುಗಿಸಿರುವ ಈ ಸಿನಿಮಾ ಶೀಘ್ರದಲ್ಲೇ ಸೆಟ್ಗೆ ಬರಲಿದೆ. ಇತ್ತೀಚೆಗಷ್ಟೇ ಸಮಂತಾ ಆರೋಗ್ಯ ಸುಧಾರಿಸಿದ್ದರಿಂದ ಮತ್ತೆ ಶೂಟಿಂಗ್ಗೆ ಮರಳಿದ್ದಾರೆ.