ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಮಿ ವಿಜಯ್ ಮಲ್ಯ ಅವರ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ನಾಳೆಗೆ(ಮಾ.10) ಸುಪ್ರೀಂ ಕೋರ್ಟ್ ಮುಂದೂಡಿದೆ.
ಹಿರಿಯ ವಕೀಲ ಜೈದೀಪ್ ಗುಪ್ತ ಅವರ ಮನವಿ ಮೇರೆಗೆ ನ್ಯಾಯಮೂರ್ತಿಗಳಾದ ಯು ಯು ಲಲಿತ್, ರವೀಂದ್ರ ಎಸ್ ಭಟ್, ಪಿ ಎಸ್ ನರಸಿಂಹ ಅವರ ನೇತೃತ್ವದ ನ್ಯಾಯಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ತಮ್ಮ ಮಕ್ಕಳಿಗೆ 40 ಮಿಲಿಯನ್ ಡಾಲರ್ ಹಣವನ್ನು ವರ್ಗಾಯಿಸಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ವಿಜಯ್ ಮಲ್ಯ ಅವರನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿದ್ದು,ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೊಟೀಸ್ ನೀಡಿತ್ತು.
ಫೆಬ್ರವರಿ 10ರಂದು ಸುಪ್ರೀಂಕೋರ್ಟ್ ವಿಜಯ್ ಮಲ್ಯ ಅವರಿಗೆ ಖುದ್ದು ಹಾಜರಾಗಲು ಅಥವಾ ಕೌನ್ಸೆಲ್ ಮೂಲಕ ವಿಚಾರಣೆಗೆ ಹಾಜರಾಗಲು ಎರಡು ವಾರಗಳ ಸಮಯಾವಕಾಶ ನೀಡಿತ್ತು. ಆದರೆ ಅವರು ಬರಲಿಲ್ಲ. ಇದೀಗ ನಾಳೆ ಅವರು ಕೋರ್ಟ್ ಗೆ ಹಾಜರಾಗಲು ವಿಫಲವಾದರೆ ತಾರ್ಕಿಕ ಅಂತ್ಯವನ್ನು ಸುಪ್ರೀಂ ಕೋರ್ಟ್ ತೆಗೆದುಕೊಳ್ಳಲಿದೆ.