May 10, 2026
Sunday, May 10, 2026
spot_img

ಸಾಲದ ಸುಳಿಯ ನಡುವೆ ಆಡಳಿತದ ಜವಾಬ್ದಾರಿ ಹೊತ್ತಿದ್ದೇನೆ ಎಂದ ವಿಜಯ್: ಸ್ಟಾಲಿನ್ ಫುಲ್ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿ ಜೋಸೆಫ್ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ಆರ್ಥಿಕ ಸ್ಥಿತಿ ಕುರಿತು ನೀಡಿದ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಜ್ಯದ ಖಜಾನೆ ಸಂಕಷ್ಟದಲ್ಲಿದ್ದು, ಭಾರೀ ಸಾಲದ ಹೊರೆ ನಡುವೆಯೇ ಆಡಳಿತದ ಜವಾಬ್ದಾರಿ ಹೊತ್ತಿದ್ದೇನೆ ಎಂಬ ವಿಜಯ್ ಮಾತುಗಳಿಗೆ ಇದೀಗ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಸರ್ಕಾರದ ಬಳಿ ಹಣವೇ ಇಲ್ಲ ಎಂಬ ಸಂದೇಶವನ್ನು ಜನರಿಗೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಜನಪರ ಯೋಜನೆಗಳನ್ನು ಜಾರಿಗೆ ತರಲು ಹಣದ ಜೊತೆಗೆ ಆಡಳಿತದ ಇಚ್ಛಾಶಕ್ತಿ ಮತ್ತು ಯೋಜನಾ ಸಾಮರ್ಥ್ಯ ಮುಖ್ಯ ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ:

ಕೋವಿಡ್, ಪ್ರವಾಹ ಹಾಗೂ ಹಲವು ಸವಾಲುಗಳ ನಡುವೆಯೂ ಹಿಂದಿನ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿತ್ತು ಎಂದು ಸ್ಟಾಲಿನ್ ನೆನಪಿಸಿದ್ದಾರೆ. ರಾಜ್ಯದ ಸಾಲದ ಪ್ರಮಾಣವೂ ನಿಗದಿತ ಮಿತಿಯೊಳಗೇ ಇತ್ತು ಎಂದು ಸ್ಪಷ್ಟಪಡಿಸಿ, ಆರ್ಥಿಕ ಸ್ಥಿತಿಯ ವಿವರಗಳನ್ನು ಈಗಾಗಲೇ ಬಜೆಟ್‌ನಲ್ಲಿ ಬಹಿರಂಗಪಡಿಸಲಾಗಿತ್ತು ಎಂದು ಹೇಳಿದ್ದಾರೆ.

ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಹೊಣೆ ಈಗ ಹೊಸ ಸರ್ಕಾರದ ಮೇಲಿದೆ ಎಂದು ಹೇಳಿರುವ ಸ್ಟಾಲಿನ್, ಆಡಳಿತದ ಸವಾಲುಗಳನ್ನು ಅರ್ಥಮಾಡಿಕೊಂಡು ರಾಜ್ಯದ ಅಭಿವೃದ್ಧಿ ಪಥವನ್ನು ಮುಂದುವರಿಸಲಿ ಎಂದು ತಮಿಳುನಾಡುದ ಹೊಸ ಸರ್ಕಾರಕ್ಕೆ ಶುಭ ಹಾರೈಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !