ವಿಜಯ ಸಂಕಲ್ಪ ಯಾತ್ರೆ: ಶಿವಾಜಿನಗರದಲ್ಲಿ ಜೆ.ಪಿ.ನಡ್ಡಾರಿಂದ ಅದ್ದೂರಿ ರೋಡ್ ಶೋ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರು:ವಿಜಯ ಸಂಕಲ್ಪ ಯಾತ್ರೆದ ಭಾಗವಾಗಿ ಶಿವಾಜಿನಗರದಲ್ಲಿ ಇಂದು ಬಿಜೆಪಿ ಯಾತ್ರೆ ನಡೆಯಿತು. ಈ ವೇಳೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಆತ್ಮೀಯ ಸ್ವಾಗತ ಸಿಕ್ಕಿತು.

ನೂರಾರು ಮಹಿಳಾ ಕಾರ್ಯಕರ್ತೆಯರು ಪೂರ್ಣಕುಂಭದ ಮೂಲಕ ಜೆ.ಪಿ.ನಡ್ಡಾ ಅವರನ್ನು ಸ್ವಾಗತಿಸಿದರು. ಬಿಜೆಪಿಗೆ ಮತ ನೀಡಿ ಗೆಲ್ಲಿಸುವಂತೆ ವಿನಂತಿಸಲಾಯಿತು. ಭಾರತ್ ಮಾತಾಕೀ ಜೈ, ಬಿಜೆಪಿಗೆ ಜಯವಾಗಲಿ ಘೋಷಣೆಗಳನ್ನು ಕೂಗಲಾಯಿತು. ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಈ ಅದ್ಧೂರಿ ರೋಡ್ ಶೋದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭ ಕರ್ನಾಟಕದ ಚುನಾವಣಾ ಸಹ ಉಸ್ತುವಾರಿ ಮತ್ತು ತಮಿಳುನಾಡು ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ಕೇಂದ್ರ ಸಚಿವ ಎಲ್. ಮುರುಗನ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ, ರಾಜ್ಯದ ಸಚಿವರು ಮತ್ತು ಯಾತ್ರೆ-4ರ ಉಸ್ತುವಾರಿ ಆರ್ ಅಶೋಕ್, ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್, ಶಾಸಕ ಎಸ್.ರಘು, ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಅ.ದೇವೇಗೌಡ, ಕೇಂದ್ರ ಜಿಲ್ಲಾಧ್ಯಕ್ಷ ಮಂಜುನಾಥ್ ಅವರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!