ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ.ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ. ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳದ ವಿಜಯಲಕ್ಷ್ಮಿ, ಸೋಶಿಯಲ್ ಮೀಡಿಯಾವನ್ನು ಡಿ ಆಕ್ಟಿವೇಟ್ ಅಥವಾ ಡಿಪಿ ಮಾತ್ರ ತೆಗೆದಿದ್ದಾರೆ.
ಇಷ್ಟೇ ಅಲ್ಲ ಪತಿ ದರ್ಶನ್ ಅವರನ್ನು ಅನ್ಫಾಲೋ ಮಾಡಿದ್ದಾರೆ. ಈ ನಡೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ.