ದಿಗಂತ ವರದಿ ವಿಜಯಪುರ:
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತನಗೆ ವೋಟು ಹಾಕಲಿಲ್ಲ ಎಂದು ಸೋತ ಅಭ್ಯರ್ಥಿ ಹಾಗೂ ಆತನ ಬೆಂಬಲಿಗರಿಂದ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಇಲ್ಲಿನ ಜೈಲು ದರ್ಗಾ ಬಳಿಯ ವಾರ್ಡ್ ನಂ. 2 ರಲ್ಲಿ ಪಾಲಿಕೆ ಚುನಾವಣೆಯಲ್ಲಿ ಸೋಲು ಕಂಡಿರುವ ಅಭ್ಯರ್ಥಿ ಹಾಗೂ ಆತನ ಬೆಂಬಲಿಗರು, ಇಲ್ಲಿನ ದೇವಕಾಂತ ಬಿಜ್ಜರಗಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ದೇವಕಾಂತ ಬಿಜ್ಜರಗಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬ ಸದಸ್ಯರು, ಹಲ್ಲೆ ಮಾಡಿರುವ ಆರೋಪಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.