ವಿಜಯಪುರ: ಕೂಡಗಿ ಎನ್ ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅಗ್ನಿ ಅವಗಢ

ಹೊಸದಿಗಂತ ವರದಿ ವಿಜಯಪುರ:
ಜಿಲ್ಲೆಯ ಕೂಡಗಿ ಎನ್ ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅಗ್ನಿ ಅವಗಢ ಸಂಭವಿಸಿರುವ ಘಟನೆ ಶುಕ್ರವಾರ ನಡೆದಿದೆ.
ಇಲ್ಲಿನ ಸ್ಥಾವರದ ಟಿಪಿ-2 ಕಲ್ಲಿದ್ದಲು ಘಟಕದಲ್ಲಿ, ಕಲ್ಲಿದ್ದಲು ಸಾಗಣೆಯ ಯಂತ್ರ ಚಾಲನೆಯಲ್ಲಿ ಇರುವಾಗ ಬೇರಿಂಗ್ ತಿರುಗುತ್ತ ಶಾಖೋತ್ಪನ್ನಗೊಂಡು ರಬ್ಬರ್ ಬೆಲ್ಟ್ ಗೆ ಬೆಂಕಿ ತಾಕಿ ದುರಂತ ಸಂಭವಿಸಿದೆ.
ಕೂಡಲೇ ಸ್ಥಾವರ ವ್ಯಾಪ್ತಿಯ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ದುರಂತ ನಡೆದು ಗಂಟೆ ಮೇಲಾದರೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ತಿಳಿದಿಲ್ಲ. ಹಾಗಾದರೆ ಸ್ಥಾವರದಲ್ಲಿ ಕಾರ್ಯನಿರ್ವಹಣೆ ಮಾಡುವ ಕ್ವಿಕ್ ರೆಸ್ಪಾನ್ಸ್ ಟೀಮ್ (QRT) ಕಾರ್ಯ ನಿಷ್ಕ್ರಿಯಗೊಂಡಿದೆಯೇ ? ಎನ್ನುವ ಅನುಮಾನ ಮೂಡುವಂತಾಗಿದೆ.
ಬೆಂಕಿ ಅವಘಡದಿಂದ ನಷ್ಟದ ಕುರಿತು ಮಾಹಿತಿ ತಿಳಿದು ಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!