ಹೊಸದಿಗಂತ ವರದಿ ವಿಜಯಪುರ:
ನಗರದ ಗೋದಾಮಿನ ದುರಂತದಲ್ಲಿ ಸಾವಿಗೀಡಾದ ಬಿಹಾರದ ಕಾರ್ಮಿಕರ ಕುಟುಂಬಕ್ಕೆ ಸರ್ಕಾರದಿಂದ
ತಲಾ 2 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಭೀರ ಗಾಯಾಳುಗಳಿಗೆ ಒಂದು ಲಕ್ಷ, ಸಣ್ಣಪುಟ್ಟ ಗಾಯಾಳುಗಳಿಗೆ 50 ಸಾವಿರ ನೀಡಲಾಗುತ್ತದೆ. ಅಲ್ಲದೇ, ಕಾರ್ಖಾನೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಆಗದಂತೆ ಮಾಲೀಕರು ಮುನ್ನೆಚ್ಚರಿಕೆವಹಿಸಬೇಕು ಎಂದರು.
ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.