ಹೊಸ ದಿಗಂತ ವರದಿ, ವಿಜಯಪುರ:
ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು, ಮನೆಯ ಇಂಟರ್ ಲಾಕ್ ಕಟ್ ಮಾಡಿ ಮನೆಯಲ್ಲಿದ್ದ 6.28 ಲಕ್ಷ ಮೌಲ್ಯದ 206 ಗ್ರಾಂ ಚಿನ್ನವನ್ನು ಕದ್ದು ಪರಾರಿಯಾಗಿರುವ ಘಟನೆ ಇಲ್ಲಿನ ಚಾಲುಕ್ಯ ನಗರದಲ್ಲಿ ನಡೆದಿದೆ.
ಇಲ್ಲಿನ ಮಹಾದೇವ ಜಾಧವ ಎಂಬವರು, ಮನೆಗೆ ಬೀಗ ಹಾಕಿ, ದೆಹಲಿಗೆ ಹೋದ ವೇಳೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.