ವಿಜಯಪುರ: ಇಬ್ಬರು ಮಹಿಳಾ ಸಾಧಕರಿಗೆ ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ

ಹೊಸದಿಗಂತ ವರದಿ ವಿಜಯಪುರ:
ನಗರ ಹೊರ ವಲಯ ತೊರವಿ ಬಳಿಯ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡ 13, 14 ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಹಿಳಾ ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಡಾ.ಜಿ.ಎಸ್. ಸುಶೀಲಮ್ಮ, ರೇಷ್ಮಾ ಕೌರ್ ಅವರಿಗೆ ಗೌರವ ಡಾಕ್ಟರೇಟ್ ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.
ಹೊಸ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಶಾಂತಿಶ್ರೀ ಧೂಳಪುಡಿ ಪಂಡಿತ, ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯ ಕುಲಪತಿ ಬಿ.ಕೆ. ತುಳಸಿಮಾಲ, ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ, ಎಸ್ಪಿ ಎಚ್.ಡಿ. ಆನಂದಕುಮಾರ, ಪ್ರೊ. ಓಂಕಾರ ಕಾಕಡೆ ಸೇರಿದಂತೆ ಮತ್ತಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!