ವಿಜಯಪುರ| ಶಿಕ್ಷಕ ಆತ್ಮಹತ್ಯೆ ಪ್ರಕರಣ: ಬಿಇಒ ಸೇರಿ ನಾಲ್ವರ ಅಮಾನತು

ಹೊಸ ದಿಗಂತ ವರದಿ, ವಿಜಯಪುರ:

ಜಿಲ್ಲೆಯ ಸಿಂದಗಿ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶಿಕ್ಷಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಸಿಂದಗಿ ಬಿಇಒ ಸೇರಿ ಮೂವರು ಶಿಕ್ಷಕರನ್ನು ಅಮಾನತು ಮಾಡಿ ಡಿಡಿಪಿಐ ಉಮೇಶ ಶಿರಹಟ್ಟಿಮಠ ಸೋಮವಾರ ಆದೇಶ ಹೊರಡಿಸಿದ್ದಾರೆ.

ಸಿಂದಗಿ ಬಿಇಒ ಎಚ್.ಎಂ. ಹರನಾಳ, ಶಿಕ್ಷಕರಾದ ಜಿ.ಎನ್. ಪಾಟೀಲ, ಎಸ್.ಎಲ್. ಭಜಂತ್ರಿ, ಬಿ.ಎಂ. ತಳವಾರ ಅಮಾನತುಗೊಂಡವರು. ಶಿಕ್ಷಕ ಬಸವರಾಜ ನಾಯಕಲ್ ಡೆತೆ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ ಬಿಇಒ ಸೇರಿ ಶಿಕ್ಷಕರನ್ನು ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ. ಈಗಾಗಲೇ ಈ ನಾಲ್ವರ ವಿರುದ್ಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ:
ಶಿಕ್ಷಕ ಬಸವರಾಜ ನಾಯಕಲ್ ಡೆತ್ ನೋಟ್ ಬರೆದಿಟ್ಟು, ಸಿಂದಗಿ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದ ಮರಕ್ಕೆ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೂಲತಃ ಕೋರವಾರ ಗ್ರಾಮದವರಾದ ಬಸವರಾಜ ನಾಯಕಲ್, ಸಾಸಾಬಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಆತ್ಮಹತ್ಯೆಗೆ ಶಾಲೆಯ ಈ ಹಿಂದಿನ ಮುಖ್ಯ ಶಿಕ್ಷಕ ಎಸ್.ಎಲ್. ಭಜಂತ್ರಿ, ಸಿಂದಗಿ ಬಿಇಒ ಎಚ್.ಎಂ. ಹರನಾಳ, ಸಿಆರ್‌ಪಿ ಜಿ.ಎನ್. ಪಾಟೀಲ ಹಾಗೂ ಬಿ.ಎಂ. ತಳವಾರ ಅವರ ಕಿರುಕುಳವೇ ಎಂದು ಡೆತೆ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಎಸ್.ಎಲ್. ಭಜಂತ್ರಿ ಮುಖ್ಯಶಿಕ್ಷಕ ಹುದ್ದೆಯ ಚಾರ್ಜ್ ಶಿಕ್ಷಕ ಬಸವರಾಜಗೆ ಬಿಟ್ಟು ಕೊಟ್ಟಿದ್ದರು. ಚಾರ್ಜ್ ಬಿಟ್ಟುಕೊಟ್ಟ ಬಳಿಕ ಭಜಂತ್ರಿ ಸತಾಯಿಸಿದ್ದಾರೆ. ಈ ಬಗ್ಗೆ ಸಿಂದಗಿ ಬಿಇಒ ಗಮನಕ್ಕೂ ತಂದಿದ್ದರೂ ಪ್ರಯೋಜನ ಆಗಿಲ್ಲ. ಇನ್ನು ಸಿಂದಗಿ ಬಿಇಒ ಎಚ್.ಎಂ. ಹರಿನಾಳ ನೋಟಿಸ್ ಕೊಡುತ್ತಿದ್ದರು. ಗ್ರಾಮದ ಸಂಗಮೇಶ ಚಿಂಚೋಳಿ ಎಂಬವರಿಂದ ಅಲಿಗೆಷನ್ ಮಾಡಿ, ಸಿಆರ್‌ಪಿ ಹಾಗೂ ಸಂಗಮೇಶ ನನ್ನಿಂದ ಹಣ ಪಡೆದಿದ್ದರು. ಬಿಸಿಯೂಟ ಯೋಜನೆಯಡಿ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಹಣ ಲಪಟಾಯಿಸುತ್ತಿದ್ದ ಎಂದು ದೂರು ನೀಡಿದರು. ಆದರೆ, ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಆಗಿದೆ. ನನ್ನ ಹೆಂಡತಿ, ಓರ್ವ ಮಗಳಿಗೆ ನ್ಯಾಯ ಒದಗಿಸಿಕೊಡಬೇಕು, ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!