ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ನಳಿನ್‌ ಕುಮಾರ್‌ ಕಟೀಲ್ ಅಭಿನಂದನೆ

ಹೊಸದಿಗಂತ ವರದಿ,ಮಂಗಳೂರು:

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ಬಿಜೆಪಿಯನ್ನು ಮತ್ತಷ್ಟು ಬಲಪಡಿಸುವುದರೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಶ್ರಮಿಸುವುದಾಗಿ ಬಿಜೆಪಿ ನಿರ್ಗಮನ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ಎಸ್‌.ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಮತ್ತು ವಿಜಯೇಂದ್ರ ಜೊತೆಯಾಗಿಯೇ ಪಕ್ಷವನ್ನು ಮರಳಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಶ್ರಮಿಸುದ್ದೇವೆ ಎಂದು ಅವರು ಹೇಳಿದರು.

ವಿಜಯೇಂದ್ರ ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನಮ್ಮ ಜತೆ ಪ್ರವಾಸ ಮಾಡುತ್ತಿದ್ದವರು. ಯುವ ಮೋರ್ಚಾ ರಾಜ್ಯಾಧ್ಯಕ್ಷರಾಗಿಯೂ ಓಡಾಟ ನಡೆಸಿದ ಅನುಭವಿ. ಅವರು ಉತ್ತಮ ರೀತಿಯಲ್ಲಿ ಪಕ್ಷ ಸಂಘಟಿಸಿ ಬಿಜೆಪಿಯನ್ನು ರಾಜ್ಯದಲ್ಲಿ ಮರಳಿ ಅಧಿಕಾರಕ್ಕೆ ತರುವಲ್ಲಿ ಶ್ರಮಿಸುತ್ತಾರೆ.

ನಾನೂ ಅವರ ಜತೆಯಲ್ಲಿ ರಾಜ್ಯ ಓಡಾಟ ನಡೆಸುತ್ತೇವೆ ಎಂದು ನಳಿನ್ ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!