ಹೊಸದಿಗಂತ ವರದಿ,ಕೊಪ್ಪಳ:
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಿದಿರುವುದು ಸಂತಸವಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನೂತನವಾಗಿ ಆಯ್ಕೆಯಾದ ವಿಜಯೇಂದ್ರ ಅವರು ಯುವನಾಯಕರಾಗಿದ್ದು, ಪಕ್ಷ ಸಂಘಟಕರಾಗಿ ರಾಜ್ಯಾದ್ಯಂತ ಹೆಸರು ಗಳಿಸಿದ್ದಾರೆ. ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದು ಸ್ವಾಗತಾರ್ಹ. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ 28 ಸ್ಥಾನ ಬಿಜೆಪಿ ಗೆಲ್ಲುವುದು ಖಚಿತ ಎಂದರು.