ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ: ಹೈಕಮಾಂಡ್ ತೀರ್ಮಾನ ಅಂತಿಮ ಎಂದ ಬಿ.ಎಸ್.ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನನ್ನ ಮಗ ಶಿಕಾರಿಪುರದಿಂದ ಸ್ಪರ್ಧಿಸುತ್ತಾನೆಂದು ನಿನ್ನೆ ಹೇಳಿದ್ದೇನೆ. ಆದರೆ, ಅಂತಿಮ ನಿರ್ಧಾರವನ್ನ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಜೆಪಿ ನಡ್ಡಾ ತೆಗೆದುಕೊಳ್ಳುತ್ತಾರೆ. ಅವರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಗ್ಗೆ ಪಕ್ಷದ ತೀರ್ಮಾನವೇ ಅಂತಿಮ. ನನ್ನದೇನಿದ್ದರೂ ಸಲಹೆ ಅಷ್ಟೇ. ವಿಜಯೇಂದ್ರ ಎಲ್ಲಿಂದ ಸ್ಪರ್ಧೆ ಮಾಡಿದರೂ ಗೆಲ್ಲುವ ಒಂದು ಸಾಮರ್ಥ್ಯ ಬೆಳೆಸಿಕೊಂಡಿದ್ದಾರೆ. ಹಳೆ ಮೈಸೂರು, ಶಿಕಾರಿಪುರ ಎಲ್ಲೇ ನಿಂತರು ಅವರು ಗೆಲ್ಲುತ್ತಾರೆ. ಆದರೆ ಅಂತಿಮವಾಗಿ ತೀರ್ಮಾನ ಮಾಡುದು ಪ್ರಧಾನಿ ಮೋದಿ ಎಂದರು.

ವಿಜಯೇಂದ್ರ ಸ್ಪರ್ಧೆಯಿಂದ ಕುಟುಂಬ ರಾಜಕೀಯದ ಆಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಚುನಾವಣೆ ಸ್ಪರ್ಧೆ ಮಾಡುತ್ತಿಲ್ಲ‌, ನನ್ನ ಮಗ ಸ್ಪರ್ಧಿಸುತ್ತಾರೆ. ಈ ಕಾರಣಕ್ಕೆ ನಾನು ಚುನಾವಣೆಯಿಂದ ಹಿಂದೆ ಸರಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!