ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿತ್ತಾರೆ.. ಇದ್ರಲ್ಲಿ ಯಾವ ಬದಲಾವಣೆಯೂ ಇಲ್ಲ!

ಹೊಸದಿಗಂತ ಯಾದಗಿರಿ:

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ ಎಂಬ ವಿಶ್ವಾಸವಿದೆ ಎಂದಿರುವ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲುವಾದಿ ನಾರಾಯಣಸ್ವಾಮಿ, ಅವರೊಬ್ಬ ಕ್ರೀಯಾಶೀಲ ಅಧ್ಯಕ್ಷರಾಗಿದ್ದಾರೆಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕನ ಬದಲಾವಣೆ ಸೇರಿದಂತೆಯೇ ಯಾರ ಬದಲಾವಣೆ ಇಲ್ಲ. ಈ ಬಗ್ಗೆ ಏನೇ ಇದ್ದರೂ ಪಕ್ಷದ ಹೈಕಮಾಂಡ ನೋಡಿಕೊಳ್ಳುತ್ತದೆ. ಪಕ್ಷದ ಸಂಘಟನೆ ವಿಚಾರವಾಗಿ ದೆಹಲಿಗೆ ರಾಜ್ಯಾಧ್ಯಕ್ಷರು ಹೋಗಿ ಬರುತ್ತಾರೆ. ಅದಕ್ಕೆ ಬೇರೆ ಕಲ್ಪನೆ ಕಟ್ಟುವುದು ಬೇಡ ಎಂದರು. ಇನ್ನೂ 2-3 ತಿಂಗಳಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಸಚಿವ ರಾಜಣ್ಣ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ‌ ಮುಳುಗಿದೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದರು.

ಆಸ್ಪತ್ರೆಗೆ ಚಿಕಿತ್ಸೆ ಬೇಕಿದೆ – ಛಲುವಾದಿ ಟೀಕೆ
ಇಲ್ಲಿನ‌ ತಾಯಿ,ಮಕ್ಕ‌ಳ ಜಿಲ್ಲಾ ಸರ್ಕಾರಿಗೆ ಗುರುವಾರ ಮಧ್ಯಾಹ್ನ‌ ಹಠಾತ್ ನೇ ಭೇಟಿ ಮಾಡಿ ಅಲ್ಲಿನ ಹದಗೆಟ್ಟ ವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿ, ಮೊದಲು ಸರ್ಕಾರ ಈ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಿ ಎಂದು ವ್ಯಂಗ್ಯವಾಡಿದರು.

ವಿವಿಧ ಆಸ್ಪತ್ರೆ ವಿವಿಧ ವಿಭಾಗಗಳಿಗೆ ತೆರಳಿ ಅಲ್ಲಿನ ವ್ಯವಸ್ಥೆ ಮತ್ತು ಸಮಸ್ಯೆ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದರು.

ನಂತರ ರೋಗಿಗಳಿಗೆ ಭೇಟಿ ಚಿಕಿತ್ಸೆ ಮತ್ತು ಸೌಲಭ್ಯಗಳ ಮಾಹಿತಿ ಪಡೆದ ಅವರು, ಸರ್ಕಾರದ‌ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಆಸ್ಪತ್ರೆ ನಿಭಾಯಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ದೂರಿದರು. ಸಾವಿರಾರು ಕೋಟಿ ರೂ. ಖರ್ಚು ಮಾಡುವ ಸರ್ಕಾರಕ್ಕೆ ಆಸ್ಪತ್ರೆಗಳು ಸೂಸಜ್ಜಿತವಾಗಿ ನಡೆಸಲು ಆಗುತ್ತಿಲ್ಲ ಎಂದು ದೂರಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!