ವಿಕಸಿತ ಭಾರತ ಸಂಕಲ್ಪ ಯಾತ್ರೆ: ಗ್ಯಾಸ್ ಸಿಲೆಂಡರ್, ಅಡುಗೆ ಕಿಟ್ ವಿತರಣೆ

ಹೊಸದಿಗಂತ ವರದಿ, ಅಂಕೋಲಾ:

ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಗುರುತಿಸಲಾಗಿದ್ದ ತಾಲೂಕಿನ ಬೆಳಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ 40 ಕುಟುಂಬಗಳಿಗೆ
ಪ್ರಧಾನಮಂತ್ರಿ ಉಜ್ವಲ ಗ್ಯಾಸ್ ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲೆಂಡರ್ ಮತ್ತು ಅಡುಗೆ ಕಿಟ್ ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ ಮಾತನಾಡಿ ಉಜ್ವಲ ಗ್ಯಾಸ್ ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದ್ದು ದೇಶದ ಲಕ್ಷಾಂತರ ಕುಟುಂಬಗಳು ಯೋಜನೆಯ ಲಾಭ ಪಡೆಯುತ್ತಿವೆ ಎಂದರು.
ಉಜ್ವಲ ಯೋಜನೆಯಿಂದಾಗಿ ಅದೆಷ್ಟೋ ಬಡ ಮಹಿಳೆಯರು ಕಟ್ಟಿಗೆ ಉರಿಸಿ ಅಡುಗೆ ಮಾಡುವುದು ತಪ್ಪಿದೆ ಮಹಿಳೆಯರ ಆರೋಗ್ಯ ಮತ್ತು ಅರಣ್ಯ ರಕ್ಷಣೆಗೆ ಉಜ್ವಲ ಯೋಜನೆ ಮಹತ್ವದ ಕೊಡುಗೆ ನೀಡಿದೆ ಎಂದರು.
ಬೆಳಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಬೀರಣ್ಣ ನಾಯಕ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯತ್ ಸದಸ್ಯರುಗಳಾದ ಮಾದೇವಿ ಗೌಡ, ಸೋಮ ಗೌಡ, ಅನಂತ ನಾಯ್ಕ, ಸುಕ್ರು ನಾಯ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೀಲಕಂಠ ನಾಯಕ, ಇಂಡಿಯನ್ ಗ್ಯಾಸ್ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ, ನವೀನ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!