ರಸ್ತೆ ಕಳಪೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ: 4.5ಕೋಟಿ ರೂ. ನೀರಲ್ಲಿ ಹೋಮ

ಹೊಸದಿಗಂತ ವರದಿ ಬೀದರ್:

ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅಟ್ಟೂರು-ಬೆಳಮಗಿ ಕ್ರಾಸ್ ಬಳಿ ಪ್ರಧಾನಿ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನೂತನವಾಗಿ ನಿರ್ಮಿಸಲಾಗುತ್ತಿರುವ ರಸ್ತೆ ಅತ್ಯಂತ ಕಳಪೆ ಮಟ್ಟದ್ದಾಗಿದ್ದು ರಸ್ತೆ ನಿರ್ಮಾಣ ಸ್ಥಳಕ್ಕೆ ಅಟ್ಟೂರು ಗ್ರಾಮಸ್ಥರು ಭೇಟಿ ನೀಡಿ ಕಳಪೆ ಕಾಮಗಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ನಿರ್ಮಿಸಿದ ಗುತ್ತಿಗೆದಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ ಇಲ್ಲವಾದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನಕ್ಕೆ ಬಹಿಷ್ಕಾರ ಮಾಡಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಹಾದೇವ ಬಿರವಟ್ಟೆ, ಶರಣಕುಮಾರ್ ಮೂಲಗೆ ಶರಣಕುಮಾರ್ ಮೋಸ್ತೆ, ಸಾಗರ ಮಲಗೆ, ಶ್ರೀಕಾಂತ ಬಾಬಜಿ, ಅರುಣ್ ಮಾಲಿಪಾಟೀಲ, ಹಣಮಂತ ಮಡಿವಾಳ, ಸಾಗರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!