ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿರುವ ಬಗ್ಗೆ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಮಾತನಾಡಿದ್ದು, ಅವರಿಗೆ ಬೆಳ್ಳಿ ಪದಕ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸೌರವ್ ಗಂಗೂಲಿ, ತನಗೆ ಸರಿಯಾಗಿ ಕುಸ್ತಿಯ ನಿಯಮಗಳು ತಿಳಿದಿಲ್ಲ, ಆದರೆ ಅವರು ಬೆಳ್ಳಿ ಪದಕಕ್ಕೆ ಅರ್ಹರು ಎಂದು ಹೇಳಿದ್ದಾರೆ.
ನಿಖರವಾದ ನಿಯಮ ಏನು ಎಂದು ನನಗೆ ತಿಳಿದಿಲ್ಲ, ಆದರೆ ವಿನೇಶ್ ಫೈನಲ್ಗೆ ಹೋಗುವ ತನಕ ಸರಿಯಾಗಿ ಅರ್ಹತೆ ಪಡೆದಿದ್ದಾರೆ ಎಂದು ನನಗೆ ಖಾತ್ರಿಯಿದೆ. ಆದ್ದರಿಂದ ಫೈನಲ್ ಗೆ ಹೋದ ಮೇಲೆ ಬೆಳ್ಳಿ ಅಥವಾ ಚಿನ್ನದ ಪದಕಕ್ಕೆ ಅರ್ಹರು. ಹೀಗಾಗಿ ಅವರನ್ನು ತಪ್ಪಾಗಿ ಅನರ್ಹಗೊಳಿಸಲಾಗಿದೆ. ಹೀಗಾಗಿ ಅವರು ಕನಿಷ್ಠ ಬೆಳ್ಳಿಗೆ ಅರ್ಹರು ಎಂದು ಗಂಗೂಲಿ ಹೇಳಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹಗೊಂಡ ವಿನೇಶ್ ಫೋಗಟ್ ಅವರಿಗೆ ಬೆಳ್ಳಿ ಪದಕ ನೀಡಬೇಕೇ ಎಂಬ ಬಗ್ಗೆ ತೀರ್ಪು ನೀಡುವ ಗಡುವನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್) ಆಗಸ್ಟ್ 13 ರವರೆಗೆ ವಿಸ್ತರಿಸಿದೆ.
ವಿನೇಶ್ ಫೋಗಟ್ ವರ್ಸಸ್ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ಮತ್ತು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ವಿಷಯದಲ್ಲಿ ಏಕಮಾತ್ರ ಮಧ್ಯಸ್ಥಿಕೆದಾರ ಡಾ.ಅನ್ನಾಬೆಲ್ಲೆ ಬೆನೆಟ್ ಅವರಿಗೆ ಆಗಸ್ಟ್ 13, 2024 ರಂದು ಸಂಜೆ 6-00 ಗಂಟೆಯವರೆಗೆ ನಿರ್ಧಾರ ತೆಗೆದುಕೊಳ್ಳಲು ಸಿಎಎಸ್ನ ತಾತ್ಕಾಲಿಕ ವಿಭಾಗವು ಸಮಯವನ್ನು ವಿಸ್ತರಿಸಿದೆ ಎಂದು ಐಒಎ ಶನಿವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.