ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಮಾರ್ಚ್ 24 ರಂದು ಶಿಕಾರಿಪುರದಲ್ಲಿ ಬೈಕ್ ಸವಾರಿ ನಡೆಸಿದ್ದರು. ರ್ಯಾಲಿಯಲ್ಲಿ ಕೇವಲ ಹತ್ತು ದ್ವಿಚಕ್ರವಾಹನಗಳು ಮತ್ತು ಒಂದು ಜೀಪ್ ಬಳಸಲು ಅವರು ಅನುಮತಿ ಪಡೆದಿದ್ದರು.
ಆದರೆ ರ್ಯಾಲಿಯಲ್ಲಿ 50ಕ್ಕೂ ಹೆಚ್ಚು ದ್ವಿಚಕ್ರವಾಹನ ಹಾಗೂ ನಾಲ್ಕು ಕಾರುಗಳು ಪಾಲ್ಗೊಂಡಿದ್ದು, ಚುನಾವಣಾಧಿಕಾರಿಗಳ ದೂರಿನ ಮೇರೆಗೆ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.