ನೀತಿ ಸಂಹಿತೆ ಉಲ್ಲಂಘನೆ: ತೆಲಂಗಾಣ ಸಚಿವಗೆ ಚುನಾವಣಾ ಆಯೋಗದ ನೋಟೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತದ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ತೆಲಂಗಾಣದ ಇಂಧನ ಸಚಿವ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಜಿ ಜಗದೀಶ್ ರೆಡ್ಡಿ ಅವರಿಗೆ ನೋಟಿಸ್ ಕಳುಹಿಸಿದೆ.

ಅಕ್ಟೋಬರ್ 25 ರಂದು ಸಾರ್ವಜನಿಕ ಭಾಷಣದಲ್ಲಿ ಜಗದೀಶ್ ರೆಡ್ಡಿ ಅವರು ಮುನುಗೋಡು ಉಪಚುನಾವಣೆಯಲ್ಲಿ ಕಾರ್ ಚಿಹ್ನೆಗೆ (ಬಿಆರ್‌ಎಸ್ ಚುನಾವಣಾ ಚಿಹ್ನೆ) ಮತ ನೀಡದಿದ್ದರೆ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಹೇಳಿದ್ದರು. ಈ ಕುರಿತು ಬಿಆರ್‌ಎಸ್ ಅಭ್ಯರ್ಥಿಗೆ ಮತ ನೀಡದಿದ್ದರೆ ಎಲ್ಲಾ ಕಲ್ಯಾಣ ಯೋಜನೆಗಳನ್ನು ನಿಲ್ಲಿಸುವುದಾಗಿ ಸಚಿವರು ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಗದೀಶ್ ರೆಡ್ಡಿ ವಿರುದ್ಧ ಬಿಜೆಪಿಯ ಕಪಿಲವಾಯಿ ದಿಲೀಪ್ ಕುಮಾರ್ ಅವರು ಅಕ್ಟೋಬರ್ 26 ರಂದು ದೂರು ದಾಖಲಿಸಿದ್ದರು.

ಈ ಕುರಿತು ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗವು ನೋಟೀಸ್‌ ನೀಡಿದ್ದು ಅಕ್ಟೋಬರ್ 29 ರ ಶನಿವಾರ ಮಧ್ಯಾಹ್ನ 3 ಗಂಟೆಯೊಳಗೆ ಮೇಲಿನ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸಲು ವಿಫಲವಾದರೆ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!