ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ನಾಯಕರ ಮೇಲೆ ಎಫ್ಐಆರ್ ದಾಖಲು

ದಿಗಂತ ವರದಿ ಕಲಬುರಗಿ:

ಕಲಬುರಗಿಯ ಶ್ರೀ ಶರಣಬಸವೇಶ್ವರ ಜಾತ್ರೆಯ ಅನ್ನದಾಸೋಹ ಕಾರ್ಯಾಕ್ರಮದಲ್ಲಿ ಬಿಜೆಪಿ ರಾಜಕೀಯ ವ್ಯಕ್ತಿಗಳ ಬ್ಯಾನರ್ ಹಾಕಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಿರುವುದರಿಂದ ಬಿಜೆಪಿಯ ರಾಜಕೀಯ ನಾಯಕರ ಮೇಲೆ ಎಫ್ಐಆರ್ ಪ್ರಕರಣ ದಾಖಲಾಗಿದೆ.

ಕಲಬುರಗಿಯ ಶ್ರೀಶರಣಬಸವೇಶ್ವರ ಜಾತ್ರೆಯ ಅಂಗವಾಗಿ ಅನ್ನದಾಸೋಹ ಕಾರ್ಯಾಕ್ರಮವನ್ನು ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬ್ರಹ್ಮಪೂರದ ಕಲ್ಯಾಣಿ ಪೆಟ್ರೋಲ್ ಪಂಪ್ ಹತ್ತಿರ ಬಿ.ಜಿ ಪಾಟೀಲ್ ಫೌಂಡೇಷನ್ ರವರು ಅನ್ನದಾಸೋಹದ ಬ್ಯಾನರ್ ನಲ್ಲಿ ರಾಜಕೀಯ ವ್ಯಕ್ತಿಗಳ ಬ್ಯಾನರ್ ಹಾಕಿ, ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್ ಚಿತ್ರಗಳನ್ನು ಬ್ಯಾನರ್ ನಲ್ಲಿ ಹಾಕಿಕೊಂಡು, ಶಾಮಿಯನ್ ಹಾಕಿಸಿ ಅನ್ನದಾಸೋಹ ಏರ್ಪಡಿಸಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದರಿಂದ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ರಾಜಕೀಯ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!