ನೀತಿ ಸಂಹಿತೆ ಉಲ್ಲಂಘನೆ : ಕೇಜ್ರಿವಾಲ್ ವಿರುದ್ಧದ ಸಮನ್ಸ್ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಆದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಸಮನ್ಸ್ ಹೊರಡಿಸಿದ್ದ ಮ್ಯಾಜಿಸ್ಟ್ರೇಟ್‌ ಆದೇಶವನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಮಂಗಳವಾರ ವಜಾಗೊಳಿಸಿದೆ.

2017ರಲ್ಲಿ ನಡೆದ ಗೋವಾ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಲಾಗಿತ್ತು. ಸಮನ್ಸ್ ಜಾರಿಗೊಳಿಸಲಾಗಿತ್ತು. ಇದನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ಪಕ್ಷದ ಗೋವಾ ವಿಭಾಗದ ಮುಖ್ಯಸ್ಥ ಅಮಿತ್ ಪಾಲೇಕರ್ ತಿಳಿಸಿದ್ದಾರೆ.

ಕೇಜ್ರಿವಾಲ್ ವಿರುದ್ಧ ಸಲ್ಲಿಕೆಯಾಗಿದ್ದ ಆರೋಪಪಟ್ಟಿ ಪರಿಗಣಿಸಿ ಜೆಎಂಎಫ್‌ಸಿ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಅವರು ಪ್ರಜಾಪ್ರತಿನಿಧಿ ಕಾಯ್ದೆಯಡಿ ಸಮನ್ಸ್ ಜಾರಿಗೊಳಿಸಿದ್ದರು.

ಕಳೆದ ನವೆಂಬರ್‌ನಲ್ಲಿ ಸಮನ್ಸ್‌ ಜಾರಿಗೊಳಿಸಿದಾಗ ಕೇಜ್ರಿವಾಲ್‌ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಜತೆಗೆ ಸಮನ್ಸ್ ಕುರಿತು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಕೋರಿದ್ದರು. ಇದೇ ಪ್ರಕರಣದ ವಿಚಾರಣೆ ಫೆ. 12ರಂದು ಮ್ಯಾಜಿಸ್ಟ್ರೇಟ್ ಎದುರು ಬರಲಿದೆ ಎಂದು ಪಾಲೇಕರ್‌ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!