ಹೊಸದಿಗಂತ ವರದಿ ಕೊಪ್ಪಳ:
ಊಟ ಇಲ್ಲ ಎಂದಿದ್ದಕ್ಕೆ ಆಕ್ರೋಶಗೊಂಡ ದುಷ್ಕರ್ಮಿಗಳು ಡಾಬಾಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಘಟನೆ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿ ನಡೆದಿದೆ. ಬುಧವಾರ ರಾತ್ರಿ 12 ಗಂಟೆಗೆ ಡಾಬಾಗೆ ಬಂದ ಅಪರಿಚಿತರು ಊಟ ಕೇಳಿದ್ದಾರೆ. ಊಟ ಖಾಲಿ ಆಗಿದೆ ಎಂದು ಡಾಬಾ ಸಿಬ್ಬಂದಿ ಹೇಳಿದ್ದಾರೆ.
ಇದಕ್ಕೆ ಆಕ್ರೋಸಗೊಂಡ ಅಪರಿಚಿತರು, ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ನೀರಿನ ಸಂಪರ್ಕ ಕಡಿತಗೊಳಿಸಿ ಬೆಂಕಿ ಹಚ್ಚಿದ್ದಾರೆ. ಈ ಸಂಬಂಧ ಗಂಗಾವತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.