ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ನಡೆದ ಮಹಿಳೆ ಮೇಲಿನ ದೌರ್ಜನ್ಯ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.
ಯೋಗದ ಸದಸ್ಯ ಡಾ. ಎಸ್.ಕೆ. ವಂಟಿಗೋಡಿ ಮಾಹಿತಿ ನೀಡಿದ್ದು,ಮಾಧ್ಯಮಗಳ ವರದಿ ಆಧರಿಸಿ ಸ್ವಯಂ ಪ್ರೇರಿತ ದೂರು ದಾಖಿಸಿಕೊಳ್ಳಲಾಗಿದೆ. ನಮ್ಮ ಆಯೋಗದ ಅಧ್ಯಕ್ಷರು ಕ್ರಮ ಜರುಗಿಸುತ್ತಾರೆ. ಕ್ರಮ ಜರುಗಿಸುವ ಪ್ರಕ್ರಿಯೆ ನಡೆಯುತ್ತಿದೆ. ಎಲ್ಲಿಯೇ ಮಾನವ ಹಕ್ಕುಗಳು ಉಲ್ಲಂಘನೆಯಾದರೆ ಆಯೋಗ ದೂರು ದಾಖಲಿಸಿಕೊಳ್ಳುತ್ತದೆ. ಸಂಬಂಧಿಸಿದವರಿಂದ ವಿವರಣೆ ಸಹ ಕೇಳುತ್ತೇವೆ. ವಿವರ ಸರಿ ಇಲ್ಲದಾಗ ಸಂಬಂಧಿಸಿದ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ತಿಳಿಸಲಾಗುತ್ತದೆ ಎಂದರು.
ಕಳೆದೆರಡು ದಿನಗಳಿಂದ ತಾವು ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು, ಧಾರವಾಡದ ವಿವಿಧ ಹಾಸ್ಟೆಲ್ಗಳು, ಬಂಧಿಖಾನೆ ಹಾಗೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಪರಿಶೀಲಿಸಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು.