ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾನುವಾರ ಉದ್ಘಾಟನೆಗೊಂಡ ನೂತನ ಸಂಸತ್ ಭವನದ ಎದುರು ಪ್ರತಿಭಟನೆಗೆ ಮುಂದಾಗಿದ್ದ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಥಳಿಸಿ ವಶಕ್ಕೆ ಪಡೆದಿದ್ದಾರೆ.
ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಆರೋಪ ಹೊರಿಸಿದ್ದು, ಸಾಕಷ್ಟು ದಿನಗಳಿಂದ ಪ್ರತಿಭಟನೆಗೆ ಮುಂದಾಗಿದ್ದಾರೆ.
ಇಂದು ಮಹಿಳಾ ಸಮ್ಮಾನ್ ಮಹಾಪಂಚಾಯತ್ಗೆ ಕರೆ ನೀಡಿದ್ದು ಸಂಸತ್ ಭವನದ ಬಳಿ ಪ್ರತಿಭಟನೆಗೆ ಕರೆ ನೀಡಿದ್ದರು. ಮೆರವಣಿಗೆ ಹೊರಟ ಕುಸ್ತಿಪಟುಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದು, ಫೋಟೊ ಹಾಗೂ ವಿಡಿಯೋ ಎಲ್ಲೆಡೆ ವೈರಲ್ ಆಗಿವೆ.
ದೇಶದ ಹೆಸರನ್ನು ಉಳಿಸುವ ಕುಸ್ತಿಪಟುಗಳನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ನೆಟ್ಟಿಗರು ದೂರಿದ್ದಾರೆ.